News

ಕಲ್ಪತರು ನರ್ಸಿಂಗ್ ಸ್ಕೂಲ್ – ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ
ಬೆಳ್ತಂಗಡಿ, 23 ಜೂನ್ 2025:
ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ದಿನಾಂಕ 23-06-2025 ರಂದು ಶ್ರದ್ಧೆಯೊಂದಿಗೆಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು. ಈ ಮಹತ್ವದ ಕಾರ್ಯಕ್ರಮಕ್ಕೆ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿಯವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ತಮ್ಮ ಆಶೀರ್ವಚನ ಹಾಗೂ ಪ್ರೇರಣಾದಾಯಕ ಸಂದೇಶ ನೀಡಿದರು.ತಾಲ್ಲೂಕು ಆರೋಗ್ಯಾಧಿಕಾರಿಯಾದ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.
ಅತಿ ವಂದನೀಯ ಲಾರೆನ್ಸ್ ಮುಕ್ಕುಯಿಯವರು ಮಾತನಾಡುತ್ತಾ, “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.
ಈ ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೊಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.